Thursday, June 15, 2023

Rich people but fallen angels

What do you call a person with 3 wives and 10 kids? Well, that is Elon Musk for you. Going by Indian standards, he would be considered immoral, arrogant, against society’s values etc. But in the US (and all over the world too), he has a great fan following for many reasons. His technical skills, business skills and the wealth he has gathered because of them are not a point of discussion here. In India (or may be in few Asian countries), even if someone is extremely rich, marrying multiple times would not be acceptable. At least he is not considered a good person or a person to be looked up to. But the most advanced country in the world (US) does not seem to care about it.

Elon is not alone or just one exceptional case. Bill Gates another richest person in the world got divorced at such an old age. You would wonder why. His (former) wife surely had her own reasons which need not be expressed openly to everyone.

If you read biography of Steve Jobs, you would know that at first, he abandoned his first daughter, did not accept paternity only to accept it during final years of his life. But no one seems to pay attention to the blunders Steve Jobs had done to his family. He was and is still a legendary visionary this world has ever seen. He too has been embraced all over the world despite questionable values in his personal life.

In India, if someone is too rich and famous, people look at that person with wonder. But at the same time, if that person lives a personal life not acceptable to the larger society, he is criticized in the same breath he is praised. They would treat him like a fallen angel and not a person to be looked up to blindly.

Every society has its own values. What is acceptable in the US, need not be acceptable here. And at the same time, people of India might be seen as emotional fools by the people living in the US. Each to his own.

This problem would be a pain for the immigrants, who grew up in India but moved on to US for a better future. They would have better access to learning and employment opportunities. But they get wrong ideals for their kids. They just don’t see Elon Musk as only technically competent and rich guy but also as the one who had multiple affairs, who thinks liberally about marriage, and as a cool guy posing with different models every other year.

Well, everything comes at a cost. Give one to get one. 

Saturday, June 10, 2023

ಸತ್ತ ಮೇಲೆ ಸಮರಾದಾರು

"ಕುಲ ಕುಲ ಕುಲವೆಂದು ಹೊಡೆದಾಡದಿರಿ,
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ, ಬಲ್ಲಿರಾ?"
-ಕನಕದಾಸ

ಜಾತಿ-ವರ್ಗ ಬೇಧಗಳಿದ್ದರಿಂದಲೇ ಕನಕದಾಸರು ಈ ಗೀತೆ ರಚಿಸಿದರಲ್ಲವೇ? ಈ ಜಾತಿ ಪದ್ದತಿ ತುಂಬಾನೇ ಹಳೆಯದು. ವೇದ, ಪುರಾಣಗಳಲ್ಲಿ ಇದರ ಉಲ್ಲೇಖವಿದೆ.

ಜನ್ಮನಾ ಜಾಯತೇ ಶೂದ್ರಃ ಸಂಸ್ಕಾರಾತ್ ದ್ವಿಜ ಉಚ್ಯತೇ
- ಸ್ಕಂದ ಪುರಾಣ

ಹುಟ್ಟಿನಿಂದಲ್ಲ, ಸಂಸ್ಕಾರದಿಂದ ಬ್ರಾಹ್ಮಣ ಎಂದು ನಮ್ಮ ಪುರಾಣಗಳು ಹೇಳುತ್ತವೆ. ಆದರೆ ಹುಟ್ಟಿನಿಂದಲೇ ಜಾತಿಯನ್ನು ಪುರಸ್ಕರಿಸುವ ಪದ್ಧತಿಯೇ ಜನ ಸಾಮಾನ್ಯರಲ್ಲಿ ಬಳಕೆಗೆ ಬಂತು. ಅಷ್ಟೇ ಅಲ್ಲದೆ ಒಳ ಪಂಗಡಗಳು ಹುಟ್ಟಿಕೊಂಡವು. ಮತ್ತು ಅವುಗಳು ಆಯಾ ಧರ್ಮ ಸಂಸ್ಥಾಪಕರ ವಿಚಾರಗಳಿಗೆ ವಿರುದ್ಧವಾಗಿದ್ದವು.

ಬುದ್ಧನ ವಿಚಾರಗಳಿಗೆ ವಿರುದ್ಧವಾಗಿ ಬೌದ್ಧ ಧರ್ಮದಲ್ಲಿ ಹೀನಾಯಾನ ಮತ್ತು ಮಹಾಯಾನ ಎನ್ನುವ ಎರಡು ಪಂಗಡಗಳಾದವು. ಕ್ರಿಶ್ಚಿಯನ್ ಧರ್ಮ ಶುರು ಆದಾಗ ಕ್ಯಾಥೊಲಿಕ್ ಮತ್ತು ಪ್ರೊಟೆಸ್ಟೆಂಟ್ ಅನ್ನುವ ಬೇಧ ಭಾವ ಇರಲಿಲ್ಲ. ಹಾಗೆಯೆ ಮುಸ್ಲಿಮರಲ್ಲಿ ಶಿಯಾ-ಸುನ್ನಿ ಎನ್ನುವ ಪಂಗಡಗಳಿರಲಿಲ್ಲ. ಕಾಲ ಕಳೆದ ಹಾಗೆ ಬ್ರಾಹ್ಮಣರಲ್ಲಿ ಕೂಡ ಶೈವ-ವೈಷ್ಣವ ಪಂಗಡಗಳು ಹುಟ್ಟಿಕೊಂಡವು.

ಜಾತಿ ಅಸಮಾನತೆಯನ್ನು ವಿರೋಧಿಸಿ ಹೊಸ ಧರ್ಮವನ್ನು ಹುಟ್ಟು ಹಾಕಿದಾತ ಬಸವಣ್ಣ. ದಲಿತರ ಮನೆಯಲ್ಲಿ ಊಟ ಮಾಡಿ, ಅಂತರಜಾತಿಯ ವಿವಾಹ ಮಾಡಿಸಿ, ರಾಜನ ಕೆಂಗಣ್ಣಿಗೆ ಗುರಿಯಾದಾತ ಆತ. ಆದರೆ ಇಂದು ನೋಡಿ. ಎಷ್ಟು ಜನ ಲಿಂಗಾಯತರು ಅಂತರಜಾತಿಯ ವಿವಾಹ ಒಪ್ಪಿಕೊಳ್ಳುತ್ತಾರೆ? ಲಿಂಗಾಯತರು, ಲಿಂಗಾಯತ ಮಠಗಳು ಕಟ್ಟಿದ ಸಂಸ್ಥೆಗಳು ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡುತ್ತವೆ. ಅದು ಜಾತಿ-ಬೇಧ ಮಾಡದೆ ದಾಸೋಹ ನಡೆಸಿದ ಬಸವಣ್ಣನ ಇಚ್ಛೆಗೆ ವಿರೋಧವಾಗಿಲ್ಲವೇ? ಜಾತಿಗಳು ತರುವ ಅಸಮಾನತೆಯನ್ನು ತೊಡೆಯಲು ಕಟ್ಟಿದ ಲಿಂಗಾಯತ ಧರ್ಮದಲ್ಲಿ ಇಂದಿಗೆ ಅನೇಕ ಒಳ ಪಂಗಡಗಳಿವೆ.

ಪ್ರಪಂಚದ ಎಲ್ಲ ಜಾತಿಗಳು ಅವುಗಳ ಸಂಸ್ಥಾಪಕರ ಮೂಲ ವಿಚಾರಗಳಿಗೆ ಅನುಗುಣ ಆಗಿರದೆ, ಸಮಾಜದ ಜನರ ಅನುಕೂಲಕ್ಕೆ ತಕ್ಕಂತೆ ಬದಲಾಗಿವೆ. ಇರುವ ಜಾತಿಗಳಲ್ಲಿಯೇ ಒಳ ಪಂಗಡಗಳಾಗಿವೆ. ಹಾಗಾಗಿ ಜಾತಿ ಪದ್ದತಿ ಮತ್ತು ಮೇಲು-ಕೀಳು ಭಾವನೆಗಳು ದೂರವಾಗುವುದೆಂತು? ಅನೇಕ ಸಾಧು-ಸಂತರ, ಶಂಕರ-ಬಸವ-ಶರೀಫರಂತಹ ಸಮಾಜ ಸುಧಾರಕರ ಪ್ರಯತ್ನಗಳು ಅವರು ಬಯಸಿದ ನಿಜ ಬದಲಾವಣೆ ತರಲೆ ಇಲ್ಲ.

ಅಷ್ಟೆಲ್ಲ ಜಾತಿ ಮೇಲು-ಕೀಳು ಎಂದು ಹೊಡೆದಾಡುವ ಜನರ ಕೊನೆ ಮಾತ್ರ 'ಸತ್ಯ ಹರಿಶ್ಚಂದ್ರ ' ಚಿತ್ರದ 'ಕುಲದಲ್ಲಿ ಮೇಲ್ಯಾವುದೋ' ಗೀತೆಯ ಹಾಗೆ:

"ಇಟ್ಟ ಗಂಧಾ ಬೂದಿ ನಾಮ
ಚಟ್ಟ ಕಟ್ಟಲು ನಿರನಾಮಾ

ಉತ್ತಮ ಮಧ್ಯಮ ಅಧಮರೆಲ್ಲರು
ಸತ್ತಮೇಲೆ ಸಮರಾದಾರು

ಮಸಣದಲ್ಲಿ ಈ ವೀರಬಾಹುವ
ಕೈಯ ಮೇಲ್ಗಡೆ ಬೂದಿಯಾದರು

ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ
ಮತದಲ್ಲಿ ಮೇಲ್ಯಾವುದೋ
ಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯ
ಕೀಳ್ಯಾವ್ದು ಮೇಲ್ಯಾವುದೋ"

Friday, June 9, 2023

ಋಷಿಗಳು vs ಬುದ್ಧ

ಹಿಂದಿನ ಕಾಲದಲ್ಲಿ ಋಷಿಗಳು ಹೇಗೆ ಬದುಕಿದ್ದರು ಎನ್ನುವ ಚಿತ್ರಗಳನ್ನು ಗಮನಿಸಿ ನೋಡಿ. ಅವರುಗಳು ಉದ್ದನೆಯ ಗಡ್ಡ ಬಿಟ್ಟಿರುತ್ತಿದ್ದರು. ಅವರು ವೇದ-ಉಪನಿಷತ್ತುಗಳ  ಕರ್ತೃಗಳು  ಅಥವಾ ಅವುಗಳನ್ನು ಭೋಧಿಸುವವರು ಆಗಿದ್ದರು. ಅವರುಗಳು ಊರ ಹೊರಗಡೆ ಆಶ್ರಮಗಳಲ್ಲಿ ವಾಸಿಸುತ್ತಿದ್ದರು. ಅಲ್ಲಿ ಅವರ ಜೊತೆ ಅವರ ಹೆಂಡತಿ-ಮಕ್ಕಳು ಕೂಡ ವಾಸ ಆಗಿರುತ್ತಿದ್ದರು. ಅವರುಗಳು ತಮ್ಮ ದೇಶದ ರಾಜನಿಗೆ ಉಪದೇಶ ಮಾಡುವುದು, ಅವನ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವುದು ಇತ್ಯಾದಿ ಕೆಲಸಗಳಿಗೆ ನೆರವಾಗುತ್ತಿದ್ದರು. ಹಾಗೆಯೇ ಅವರಿಗೆ ತೊಂದರೆ ಕೊಟ್ಟವರಿಗೆ ಶಾಪ ಕೊಟ್ಟ ಉದಾಹರಣೆಗಳು ಏನೂ ಕಡಿಮೆ ಇಲ್ಲ. ಎಷ್ಟು ದೊಡ್ಡ ಋಷಿಯೊ, ಶಾಪ ಕೂಡ ಅಷ್ಟೇ ದೊಡ್ಡದಾಗಿರುತ್ತಿತ್ತು.


ಬುದ್ಧನ ಚಿತ್ರಗಳು ಅವನಿಗೆ ಮೀಸೆ-ಗಡ್ಡ ಇರುವುದು ತೋರಿಸಲಿಲ್ಲ.ಅವನು ಮೂರ್ತಿ ಪೂಜೆಯ ವಿರೋಧಿ ಆಗಿದ್ದ. ಅವನು ಹೆಂಡತಿ-ಮಕ್ಕಳನ್ನು ಬಿಟ್ಟು ಬಂದಿದ್ದ. ಅವನು ಒಂದು ಸ್ಥಳದಲ್ಲಿ ವಾಸ ಮಾಡದೆ ಅಲೆಮಾರಿಯಾಗಿದ್ದ. ಅವನು ರಾಜ ಮತ್ತು ಸಾಮಾನ್ಯರ ನಡುವೆ ಭೇಧ-ಭಾವ  ತೋರಿಸಲಿಲ್ಲ. ಅವನು ವೇದಾಭ್ಯಾಸ ಮಾಡಲಿಲ್ಲ. ದೇವರನ್ನು ನಂಬು ಎಂದು ಹೇಳಲಿಲ್ಲ. ಬದಲಿಗೆ ನಮ್ಮ ಆಸೆಗಳಿಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಿದ. ಅವನು ಸಿಟ್ಟಾದ ಅಥವಾ ಶಾಪ ಕೊಟ್ಟ ಉದಾಹರಣೆಗಳೇ ಇರಲಿಲ್ಲ. ಬುದ್ಧ ಗುರುವಿನ ಬಳಿ ಕಲಿತು ಜ್ಞಾನಿ ಆಗಲಿಲ್ಲ ಮತ್ತು ಜ್ಞಾನದ ಬಗ್ಗೆ ಭೋದಿಸಲಿಲ್ಲ. ಆದರೆ ಅವನು ಸ್ವಂತ ಅನುಭವದ ಜ್ಞಾನಿಯಾಗಿದ್ದ. ಅದನ್ನೇ ಸರಳ ಮಾತುಗಳಲ್ಲಿ ಹೇಳಿದ.


ಬುದ್ಧ ಯಾವ ಅವಮಾನಕ್ಕೂ ಸ್ಪಂದಿಸಲಿಲ್ಲ. ಅವನು ಕ್ಷಮಿಸಿದನೋ ಅಥವಾ ನಿರ್ಲಕ್ಷ್ಯ ಮಾಡಿದನೋ ಕೂಡ ಯಾರಿಗೂ ತಿಳಿಯಲಿಲ್ಲ.

ಬೆಂಗಳೂರಿನ ನಾನಾ ಮುಖಗಳು

ಸುಮಾರು ಒಂದೂವರೆ ಕೋಟಿ ಜನ ಜೀವನ ಸಾಗಿಸುವ ಬೆಂಗಳೂರು ನಗರಿಯಲ್ಲಿವಾಸಿಸುವ ಎಲ್ಲ ಜನರ ಅನುಭವಗಳು ಒಂದೇ ಆಗಿರಲು ಸಾಧ್ಯ ಇಲ್ಲ. ಇಲ್ಲಿ ಕೆಲವೇ ಸಾವಿರದಲ್ಲಿ ತಿಂಗಳ ಖರ್ಚು ನೀಗಿಸುವ ಕುಟುಬಗಳು ಇವೆ. ಹಾಗೆಯೇ ಕೋಟಿ ಹಣ ಖರ್ಚು ಮಾಡುವ ಕುಟುಂಬಗಳು ಕೂಡ ಇವೆ. ಮಂದ ಗತಿಯಲ್ಲಿ ಸಾಗುವ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಜನ ಇದ್ದಾರೆ. ಅದೇ ರಸ್ತೆಗಳಲ್ಲಿ ಐಷಾರಾಮಿ ಕಾರುಗಳಲ್ಲಿ ಪ್ರಯಾಣ ಮಾಡುವ ಜನ ಕೂಡ ಅಷ್ಟೇ ಇದ್ದಾರೆ. ವಿಕ್ಟೋರಿಯಾ-ಬೌರಿಂಗ್ ಆಸ್ಪತ್ರೆಗಳಲ್ಲಿ ವಾರಸುದಾರರಿಲ್ಲದ ಶವಗಳು ಇವೆ. ಲಕ್ಸುರಿ ಆಸ್ಪತ್ರೆಗಲ್ಲಿ ಸತ್ತವರಿಗೆ ಕಣ್ಣೀರು ಸುರಿಸದ ಆದರೆ ಅಪಾರ ಸಂಪತ್ತಿಗೆ ವಾರಸುದಾರರು ಆದವರು ಕೂಡ ಇದ್ದಾರೆ. ಇಲ್ಲಿ ಹಳ್ಳಿ-ಚಿಕ್ಕ ಊರುಗಳಲ್ಲಿ ಇರುವ ಹಾಗೆ ಒಂದು ತರಹದ ಸಂಸ್ಕೃತಿ ಇಲ್ಲವೇ ಇಲ್ಲ. ಇದು ಅನೇಕ ವಿರೋಧಾಭಾಸಗಳು ಒಟ್ಟಿಗೆ ಕಾಣುವ ಊರು.

ನಿಮಗೆ ಬೆಂಗಳೂರು ಅಂದರೆ ಏನು? ಗಿಜಿಗುಟ್ಟುವ ಮೆಜೆಸ್ಟಿಕ್ ಅಷ್ಟೇನಾ? ಜೇಬಿಗೆ ಭಾರ ಎನ್ನಿಸುವ ಮಹಾತ್ಮಾ ಗಾಂಧೀ ರಸ್ತೆಯ ಅಂಗಡಿಗಳಾ? ರಾಜಕೀಯ ಶಕ್ತಿ ಪ್ರದರ್ಶನ ಮಾಡುವ ವಿಧಾನ ಸೌಧವಾ? ಅನೇಕ ಸಿನಿಮಾ ನಟರ ಮನೆಗಳಾ? ವೈಟ್ ಫೀಲ್ಡ್ ನಲ್ಲಿ ಓಡಾಡಿ ಇದು ಅಮೆರಿಕಕ್ಕೆ ಕಡಿಮೆ ಇಲ್ಲ ಅಂದು ಕೊಳ್ಳುವುದಾ? ಜಯದೇವ ಅಥವಾ ನಾರಾಯಣ ಆಸ್ಪತ್ರೆಗೆ ಓಡಾಡಿ ಸಂಬಂಧಿಕರ ಜೀವ ಉಳಿಸಿಕೊಳ್ಳಲು ಹೆಣಗುವುದಾ?  ದೇವನಹಳ್ಳಿಯ ವಿಮಾನ ನಿಲ್ದಾಣಕ್ಕೆ ಹೋಗಿ, ಇದು ಭಾರತ ಎನ್ನುವ ಬಡ ದೇಶದ ಭಾಗವೇ ಎಂದು ನಿಮಗೆ ನೀವೇ ಪ್ರಶ್ನೆ ಕೇಳಿಕೊಳ್ಳುವುದಾ?

ರವಿ ಬೆಳಗೆರೆ ಪುಟಗಟ್ಟಲೆ ಬರೆದ ಬೆಂಗಳೂರಿನ ಭೂಗತ ಲೋಕ ಇನ್ನೂ ಮರೆಯಾಗಿಲ್ಲ ಎನ್ನುವುದು ನನಗೆ ಇತ್ತೀಚಿಗೆ ಚಿತ್ರಮಂದಿರದಲ್ಲಿ 'ಹೆಡ್ ಬುಷ್' ಎನ್ನುವ ಚಿತ್ರ ನೋಡುವಾಗ ಅಲ್ಲಿ ನೋಡುಗರಲ್ಲಿ ನಡೆದ ವಾಗ್ವಾದ ನೋಡಿ ಮನೆವರಿಕೆ ಆಯಿತು. ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್ ನಲ್ಲಿ ಸಾವಿರಾರು ಪ್ರಯಾಣಿಕರನ್ನು ವ್ಯವಸ್ಥಿತವಾಗಿ ನಿರ್ವಹಿಸಿವುದು ನೋಡಿ ನ್ಯೂಯಾರ್ಕ್ ನಗರದ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ಜನಸಂದಣಿಗೆ ಏನು ಕಡಿಮೆ ಇಲ್ಲ ಎನಿಸಿತು. ನಮ್ಮ ಮನೆ ಹತ್ತಿರ ಒಬ್ಬ ಗಂಡ-ಮಕ್ಕಳಿಲ್ಲದ ಹೆಣ್ಣು ಮಗಳು ನಡೆಸುವ ಅನಾಥಾಶ್ರಮ ನೋಡಿ ಇದೆ ದೇಶದಲ್ಲಿ ಮದರ್ ತೆರೇಸಾ ಬದುಕಿದ್ದಲ್ಲವೇ ಎಂದು ನೆನಪಾಯಿತು.

ನಾನು ಮೊದಲು ಬೆಂಗಳೂರಿಗೆ ಬಂದದ್ದು ಶಾಲೆ ಪ್ರವಾಸದ ವೇಳೆ. ನಂತರ ಕಾಲೇಜು ಕಲಿಯುವಾಗ ತರಬೇತಿಗೆ ಎಂದು ಒಂದು ತಿಂಗಳು ಇದ್ದೆ. ನಂತರ 1999 ಆಗಸ್ಟ್  ೧೫ ರಂದು ನೌಕರಿ ಹುಡುಕಿಕೊಂಡು ಬಂದ ಮೇಲೆ ಇದೆ ನನ್ನ ಮನೆಯಾಗಿದೆ. ಬರೀ ನನ್ನ  ಜೀವನೋಪಾಯಕ್ಕಲ್ಲದೆ ಅವಲಂಬಿತರಿಗೆ ಸಹಾಯ ಮಾಡುವಷ್ಟು ಶಕ್ತಿ ತುಂಬಿದೆ. ಸುಮಾರು ಇಪ್ಪತ್ತು ನಾಲ್ಕು ವರುಷಗಳನ್ನು ಇಲ್ಲಿ ಕಳೆದ ಮೇಲೂ, ಈ ನಗರ ನನಗೆ ಅಚ್ಚರಿ ತರುತ್ತದೆ.

ಹಿಂದೆ ನಾನ್ನು ಜೀವನ ಕಳೆದ ಊರುಗಳಲ್ಲಿ ಇದ್ದ ಹಾಗೆ ಇಲ್ಲಿ ಯಾರು ಸಾಧು-ಸಂತರಿಲ್ಲ. ಹಿಂದೆ ನಾನು ಇದ್ದ ಕಲ್ಬುರ್ಗಿಯಲ್ಲಿ ಶರಣಬಸವ ಅಪ್ಪನ ಗುಡಿಯಿತ್ತು. ಹುಬ್ಬಳ್ಳಿಯಲ್ಲಿ ಸಿದ್ಧಾರೂಢರ ಮಠ ಇತ್ತು. ಬೆಂಗಳೂರಿನಲ್ಲಿ ಇರುವುದು ಭಕ್ತರನ್ನು ಯಾಮಾರಿಸುವ ನಕಲಿ ಸ್ವಾಮಿಗಳು. ಇಲ್ಲಿ ಬೆವರನ್ನು ನಂಬಿ ಬದುಕುವ ಸಾಮಾನ್ಯರ ಹಾಗೆಯೇ ಮೋಸ ಮಾಡಿಯೇ ಜೀವನ ಸಾಗಿಸುವ ಜನರ ಸಂಖ್ಯೆ ಕೂಡ ಕಡಿಮೆ ಇಲ್ಲ. ಆದರೆ ಅವೆಲ್ಲ ವಿರೋಧಾಭಾಸಗಳ ನಡುವೆ ಇದು ಕೋಟ್ಯಂತರ ಜನರಿಗೆ ಆಶ್ರಯ ನೀಡಿದೆ.

ನಮ್ಮ ಆಫೀಸಿನ ಹೊರಗಡೆ ವೀರಭದ್ರೇಶ್ವರ ಖಾನಾವಳಿ ಇದ್ದ ಹಾಗೆ, ಆಂಧ್ರ ಬಿರಿಯಾನಿ ಊಟ ಕೂಡ ಅಷ್ಟೇ ಫೇಮಸ್. ಪಕ್ಕದಲ್ಲೇ ಬಂಗಾಳಿಯ ಶೈಲಿಯ ಮೀನು ಮಾಡುವ ಅಂಗಡಿ ಇದೆ. ಪಂಜಾಬಿ ಊಟ ಕೂಡ ಅದರ ಪಕ್ಕದಲ್ಲೇ. ಭಾರತದಲ್ಲಿ ಇರುವ ಎಲ್ಲ ತರಹದ ಅಡುಗೆ ಶೈಲಿಯ ಊಟಗಳು ಇಲ್ಲಿ ಲಭ್ಯ. ಅಷ್ಟೇ ಅಲ್ಲ. ಇಲ್ಲಿಗೆ ಭೇಟಿ ನೀಡುವ ವಿದೇಶಿಗರ ಅನುಕೊಲಕ್ಕಾಗಿ ಕಾಂಟಿನೆಂಟಲ್ ರುಚಿಗಳು ಕೂಡ ಲಭ್ಯ.

ಜೋಪಡಿಗಳಲ್ಲಿ, ತಾತ್ಕಾಲಿಕ ಶೆಡ್ ಗಳಲ್ಲಿ ಜನ ವಾಸ ಮಾಡಿದ ಹಾಗೆ  ಮಯ ನಿರ್ಮಿಸಿದ ಇಂದ್ರಪ್ರಸ್ಥದ ಹಾಗಿರುವ ಮನೆಗಳಲ್ಲಿ ಕೂಡ ಜನ ವಾಸ ಮಾಡುವುದು ನೀವು ಇಲ್ಲಿ ಗಮನಿಸಬಹುದು. ನಿಮಗೆ ದೇಶ ಸುತ್ತಲು ಸಾಧ್ಯ ಆಗದಿದ್ದರೆ, ಬೆಂಗಳೂರನ್ನು ಒಂದೆರಡು ಸಲ ಸುತ್ತಿ ಬಂದರೆ ಅಡ್ಡಿ ಇಲ್ಲ ಎನ್ನಬಹುದು. ತರಹೇವಾರಿ ಜನರನ್ನು ಮತ್ತು ವಿಶಿಷ್ಟ ಅನುಭವಗಳನ್ನು ಒಂದೇ ಸ್ಥಳದಲ್ಲಿ ಕೊಡುವ ಊರು ನಮ್ಮ ಬೆಂಗಳೂರು. ಇದು ನನಗೆ ಕೊಟ್ಟ ಅವಕಾಶಕ್ಕೆ ನಾನು ಋಣಿ.

ಮಗಳ ದೌರ್ಬಲ್ಯಗಳನ್ನು ಮುಚ್ಚಿ ಹಾಕಿದ ನಂತರ

'ಕೆಟ್ಟ ತಂದೆ ಇರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯ ಇಲ್ಲ' ಎನ್ನುವುದು ಸಾಕಷ್ಟು ಜನರ ಅನುಭವದ ಮಾತು. ಹಾಗೆಯೇ ಮುಂದೆ ಹೋಗಿ 'ಕೆಟ್ಟ ಮಗ ಹುಟ್ಟಬಹುದು ಆದರೆ ಕೆಟ್ಟ ಮಗಳು ಹುಟ್ಟಲು ಸಾಧ್ಯ ಇಲ್ಲ' ಎಂದು ಕೂಡ ಹೇಳಬಹುದು. ಸಾಕಷ್ಟು ಜನ ತಂದೆಯರಿಗೆ ತಮ್ಮ ಹೆಣ್ಣು ಮಕ್ಕಳೆಂದರೆ ಹೆಮ್ಮೆ. ಕಡೆಯ ಕಾಲದಲ್ಲಿ ಗಂಡು ಮಕ್ಕಳು - ಸೊಸೆಯಂದಿರು ಊಟ ಹಾಕದಿದ್ದಾಗ ತಮ್ಮ ತಂದೆ-ತಾಯಿಯನ್ನು ಸಲಹುವ ಹಲವಾರು ಹೆಣ್ಣು ಮಕ್ಕಳನ್ನು ನಾನು ನೋಡಿದ್ದೇನೆ. ತಂದೆ-ತಾಯಿಗೆ ಧೈರ್ಯ ಹೇಳುವ ಕೆಲಸ ಬೆಳೆದ ಹೆಣ್ಣು ಮಕ್ಕಳು ಮಾಡಿದರೆ, ಹೆಚ್ಚಿನ ಗಂಡು ಮಕ್ಕಳು ಅವರ ಪೋಷಕರಿಗೆ ತಲೆ ನೋವಾಗಿರುತ್ತಾರೆ.

ಹೆಣ್ಣು ಮಕ್ಕಳ ಮೇಲೆ ಇರುವ ಪ್ರೀತಿ, ತಂದೆಗೆ ಗಂಡು ಮಕ್ಕಳ ಮೇಲೆ ಇರಲು ಸಾಧ್ಯ ಇಲ್ಲ.  ಹಾಗೆಯೆ ಹೆಣ್ಣು ಮಕ್ಕಳಿಗೆ ಕೂಡ ತಂದೆಯೇ ಅವರ ಜೀವನದ ಮೊದಲ ಹೀರೋ. ಬೇರೆ ಯಾರು ಆ ಸ್ಥಾನಕ್ಕೆ ಪೈಪೋಟಿ ನೀಡಲು ಸಾಧ್ಯ ಇಲ್ಲವೇ ಇಲ್ಲ. ಇದನ್ನು ಬಹಳಷ್ಟು ಕುಟುಂಬಗಳಲ್ಲಿ ಗಮನಿಸಬಹುದು. ತಂದೆಯ ದೌರ್ಬಲ್ಯಗಳನ್ನು ಮಗಳು ಮುಚ್ಚಿ ಹಾಕಿದರೆ, ತಂದೆಗೆ ಅವನ ಮಗಳಲ್ಲಿ ದೌರ್ಬಲ್ಯಗಳನ್ನು ಹುಡುಕುವುದು ಸಾಧ್ಯವೇ ಆಗುವುದಿಲ್ಲ. ಪ್ರಕೃತಿ ಹುಟ್ಟು ಹಾಕಿದ ಈ ತಂದೆ-ಮಗಳ ಸಂಬಂಧ, ಮಗಳು ಮದುವೆ ಆಗುವವರೆಗೆ ಚೆನ್ನಾಗಿಯೇ ಇರುತ್ತದೆ. ಆದರೆ ಅಲ್ಲಿಂದ ಅದು ಬೇರೆಯೇ ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ.

ಮಗಳು ತನ್ನ ತಂದೆಯ ಮೇಲೆ ತೋರಿದ ಪ್ರೇಮ, ಮದುವೆ ಆದ ನಂತರ ಮಗಳು ತನ್ನ ಗಂಡ ಮತ್ತು ಅವನ ಕುಟುಂಬದವರ ಜೊತೆ ತೋರಲು ಸಾಧ್ಯ ಇಲ್ಲ. ತಂದೆ ಸೋಂಭೇರಿ ಆಗಿದ್ದರೂ ಸಹಿಸಿಕೊಳ್ಳುವ ಮಗಳು, ತನ್ನ ಗಂಡ-ಮಾವ-ಅತ್ತೆ ಸೋಂಭೇರಿಗಳಾಗಿದ್ದರೆ ಯಾವುದೇ ಮುಲಾಜಿಲ್ಲದೆ ಮಾನ ಹರಾಜು ಮಾಡಿಬಿಡುತ್ತಾಳೆ. ಇದು ಕೂಡ ಸಾಕಷ್ಟು ಮನೆಗಳ ಸಂಗತಿ.

ಆದರೆ ಆ ಮಗಳಲ್ಲಿ ಕೂಡ ಲೋಪ-ದೋಷಗಳು ಇರುತ್ತಲ್ಲವೇ? ಅದನ್ನು ಮಗಳು ತನ್ನ ಮನೆಯಲ್ಲಿದ್ದಾಗ ಮುಚ್ಚಿ ಹಾಕಿದ ಹಾಗೆ, ಮದುವೆ ಆದ ನಂತರ ಕೂಡ ಅವನ ಮಗಳ ಕುಟುಂಬದಲ್ಲಿ ತಲೆ ಹಾಕಿ ಅವುಗಳನ್ನು ಮುಚ್ಚಿ ಹಾಕುತ್ತ ಹೋದರೆ, ಆ ತಂದೆ ಬಹು ಬೇಗ ಮರ್ಯಾದೆ ಕಳೆದು ಕೊಳ್ಳುತ್ತಾನೆ. ಅವನಿಗೆ ಮಗಳು ಮಾಡುವ ಕೆಲಸಗಳು ಸಹಜ ಅನ್ನಿಸಬಹುದು. ಆದರೆ ಅದೇ ಕೆಲಸಗಳನ್ನು ಅವನ ಸೊಸೆ ಮಾಡಿದರೆ ಅವನು ಸಹಿಸಿಕೊಳ್ಳುವುದಿಲ್ಲ. ಈ ತರಹದ ವಿರೋಧಾಭಾಸಗಳು ಅವನ ಮಗಳು ತಪ್ಪು ತಿದ್ದಿಕೊಳ್ಳುವುದು ಬಿಟ್ಟು, ಅವುಗಳನ್ನು ಹೆಚ್ಚಿಗೆ ಮಾಡುವಂತೆ ಪ್ರಚೋದಿಸುತ್ತವೆ. ಇತ್ತೀಚಿಗೆ ಮದುವೆ ಮುರಿದು ಬಿದ್ದ ಕುಟುಂಬಗಳನ್ನು ಗಮನಿಸುತ್ತಾ ಹೋದರೆ ಅಲ್ಲಿ ಮಗಳಿಗೆ ಬುದ್ಧಿ ಹೇಳದ ತಂದೆಯ ಪಾತ್ರ ಕೂಡ ಗಮನಿಸಬಹುದು.

ತಂದೆಯ ಹತ್ತಿರ ಮಗಳು ಹೇಗೆ ನಡೆಕೊಳ್ಳುತ್ತಾಳೋ, ಅವಳು ಇತರರ ಜೊತೆ ಹಾಗೆ ನಡೆದು ಕೊಳ್ಳುತ್ತಿರುವುದಿಲ್ಲ. ಇದನ್ನು ಗಮನಿಸಲು ತಂದೆ ಸೋತು ಹೋಗುತ್ತಾನೆ. ಮಗಳ ಮೇಲಿನ ಕುರುಡು ಪ್ರೇಮ ಕೂಡ ಅದಕ್ಕೆ ಕಾರಣ ಆಗಿರುತ್ತದೆ. ಅವನು ಮಗಳು ಕೂಡ ತಂದೆ ಜೊತೆ ಸಂಬಂಧ ನಿಭಾಯಿಸಿದ ಹಾಗೆ ಉಳಿದ ಸಂಬಂಧಗಳನ್ನು ನಿಭಾಯಿಸಲು ಸೋತು ಹೋಗುತ್ತಾಳೆ.

ತಂದೆ ಸತ್ತ ಮೇಲೆ ಮಗಳ ಜೀವನ ಮುಂದುವರೆಯಬೇಕಲ್ಲವೇ? ಮಗಳಿಗೆ ಬೇಕಿರುವುದು ತಂದೆಯ ವಿವೇಕ ಮತ್ತು ಅನುಭವ ಅಲ್ಲದೇ ತಂದೆಯ ಮಿತಿ ಮೀರಿದ ಪ್ರೇಮ ಅಲ್ಲ. ಕ್ಷಮಿಸಿ, ಇದು ಎಲ್ಲ ಮನೆಯಲ್ಲಿ ನಡೆಯುವ ಸಂಗತಿ ಅಲ್ಲ. ಆದರೆ ಅನವಶ್ಯಕ ಎನ್ನಿಸುವಷ್ಟು ಮಗಳಿಗೆ ಬೆಂಬಲ ನೀಡುವ ತಂದೆ ಇದ್ದರೆ, ಆ ಮಗಳು ತನ್ನ ಗಂಡನ ಮನೆ ಬಿಟ್ಟು ಬರುವ ಸಾಧ್ಯತೆಗಳು ಕೂಡ ಅಷ್ಟೇ ಜಾಸ್ತಿ ಎನ್ನುವುದು ನನ್ನ ಸ್ವಂತ ಅನುಭವ.